*ಕೊಪ್ಪಳ*

ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆವತಿಯಿಂದ ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ರೂ. 2000 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ/ ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಇಲಾಖಾ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿಸೂಪರ್ ಸ್ಪೇಷಾಲಿಟಿ ಆಸ್ಪತ್ರೆ, ಇಂದಿರಾ ಕ್ಯಾಂಟಿನ್ ಹಾಗೂ ವಿವಿಧ ಸವತ್ತುಗಳನ್ನ ವಿತರಣೆ ಮಾಡಲಾಗಿದ್ದು ಸಂತಸವನ್ನುಂಟು ಮಾಡಿದೆ.ಈ ಹಿಂದೆ ಕೃಷಿ ಭಾಗ್ಯ ಕಾರ್ಯಕ್ರಮ ಮಾಡಲಾಗಿತ್ತು ನಂತರ ಅತಿದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸಿದ್ದು ಜನರ ಒಳಿತಿಗಾಗಿ ರಾಜ್ಯದ ಅಭಿವೃದ್ಧಿಗಾಗಿ ಎರಡು ಸಾವಿರ ಕೋಟಿ ರೂಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೇರವೆರಿಸಲಾಗಿದೆ.

ಬಿಜೆಪಿ- ಜೆಡಿಎಸ್ ಪಕ್ಷದವರು ಗ್ಯಾರಂಟಿ ಯೋಜನೆಯಿಂದ ಸರಕಾರದಲ್ಲಿ ಹಣವಿಲ್ಲಾ ಅಭಿವೃದ್ಧಿ ಆಗುತ್ತಿಲ್ಲಾ ಎಂದು ಸುಮ್ಮನೆ ಜನರ ದಿಕ್ಕು ತಪ್ಪಿಸಲು ಹೋರಟಿದ್ದಾರೆ.

ಒಂದು ಲಕ್ಷ ಕೋಟಿ ರೂ,ಗಳನ್ನ ಗ್ಯಾರಂಟಿಗಾಗಿ ಖರ್ಚು ಮಾಡಿದ್ದೇವೆ, ನಾನು ಲೆಕ್ಕ ಕೊಡಲು ತಯಾರಿದ್ದೇನೆ ಒಂದೆ ವೇದಿಕೆಯಲ್ಲಿ ಚರ್ಚೆ ನಡೆಯಲಿ .

ನುಡಿದಂತೆ ನಡೆದ ಸರಕಾರ ಇದ್ದರೆ ಅದು ನಮ್ಮ ಕಾಂಗ್ರೆಸ್ ಸರಕಾರ ಮಾತ್ರ .

ನಾಲ್ಕು ವರ್ಷ ಅಧಿಕಾರ ನಡೆಸಿದ ಬಿಜೆಪಿ ಒಂದೆ ಒಂದು ಹೊಸ ಮನೆ ಕಟ್ಟಲಿಲ್ಲಾ ಕಟ್ಟಿದ ಮನೆಗಳಿಗೆ ಹಣ ಸಹಿತ ಬಿಡುಗಡೆ ಮಾಡಲಿಲ್ಲಾ ಅದನ್ನು ನಾವು ಬಂದ ನಂತರ ಹಣ ನಿಡಿದ್ದೇವೆ.

ಸರಕಾರದ ಯೋಜನೆಗಳು ಶ್ರೀಮಂತರಿಗಷ್ಟೆ ಅಲ್ಲದೆ ಬಡವರಿಗೂ ಸಿಗಬೇಕು ಎನ್ನುವ ಉದ್ದೇಶದಿಂದ ಪ್ರತಿ ಜಿಲ್ಲೆಗೆ ಒಂದರಂತೆ ಇಗಾಗಲೇ 22 ಜಿಲ್ಲೆಯಲ್ಲಿ ಸರಕಾರಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲಾಗುತ್ತಿದೆ.

ಬಿಜೆಪಿ ಬರಿ ಸುಳ್ಳು ಆರೋಪಗಳನ್ನ ಮಾಡುವದು ಹಾಗೂ ಬಿಜೆಪಿಯವರ ಮನೆ ದೇವರೇ ಸುಳ್ಳು ಇದರಿಂದ ಜನರ ಮನಸನ್ನು ಒಡೆಯುವದು ಹಾಗೂ ಕೋಮುದ್ವೇಷ ಹರಡುವ ಕೆಲಸ ಮಾಡುವದೆ ಅವರ ಕೇಲಸವಾಗಿದೆ.

ಕೇಂದ್ರದಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗಿದ್ದು ತೆರಿಗೆ ವಸೂಲಿಯ ಹಣವನ್ನು ನಮಗೆ ಮರಳಿ ನೀಡುವಲ್ಲಿ ತಾರತಮ್ಯ ಹಾಗೂ 15ನೇ ಹಣಕಾಸಿನ ಆಯೋಗದಿಂದ ನಮಗೆ ನಷ್ಟವಾಗಿದೆ.

ಬಿಜೆಪಿಯ ಆಡಳಿತದಲ್ಲಿಯ 11,495 ಕೋಟಿ ಭದ್ರಾ ಮೆಲ್ದಂಡೆ ಯೋಜನೆಗೆ 23-24 ರಲ್ಲಿ 5,300 ಕೋಟಿ ಕೋಡ್ತಿವಿ ಅಂತಾ ಬಜೇಟ್ ಘೋಷಣೆ ಮಾಡಿದರೂ ಕೊಡಲಿಲ್ಲಾ ನಾನು ಪ್ರಧಾನಿ ಬೇಟಿಮಾಡಿ ಹೇಳಿದರು ಹಣ ಬಿಡುಗಡೆ ಮಾಡಿಲ್ಲಾ.

ಸಮಾಜದ ಕಟ್ಟ ಕಡೆಯ ಮನುಷ್ಯನಿಗೆ ನ್ಯಾಯ ಸಿಗುವಂತಾಗಬೇಕು ಎನ್ನುವ ಆಸೆಯಿಂದ ನಾನು ಅಧಿಕಾರ ಮಾಡುವವನು ನಾನು.

ಅಧಿಕಾರದಲ್ಲಿದ್ದಾಗ ಬರೀ ಲೂಟಿ ಹೊಡೆದು ರಾಜ್ಯವನ್ನು ಹಾಳು ಮಾಡಿದ್ದು ಬಿಜೆಪಿ ಸರಕಾರ.

ಕೃಷ್ಣಾ ಮೇಲ್ದಂಡೆ ಯೋಜನೆಗೆ 70-80 ಸಾವಿರ ಕೋಟಿ ಖರ್ಚಾಗುತ್ತಿದ್ದು ಹಂತ ಹಂತವಾಗಿ ಅದನ್ನು ಮಾಡಲಾಗುವದು.

ಬೆಳೆಹಾನಿ ಪ್ರದೇಶಗಳ ರೈತರಿಗೆ ತಕ್ಷಣ ಪರಿಹಾರ ಒದಗಿಸಲಾಗುತ್ತಿದೆ ದುಡ್ಡಿಲ್ಲಾ ಅಂದರೆ ಇದನ್ನೆಲ್ಲಾ ಮಾಡಲು ಸಾದ್ಯನಾ.

ವಿರೋಧ ಪಕ್ಷದ ನಾಯಕ ಆರ್ ಅಶೋಕನಿಗೆ ಏನು ಗೊತ್ತಿಲ್ಲಾ ಆರ್ ಎಸ್ ಎಸ್ ನವರು ಏನು ಬರೆದುಕೋಡುತ್ತಾರೋ ಅದನ್ನೆ ಹೇಳುತ್ತಾನೆ ಎಂದರು.

ವಿರೋಧ ಪಕ್ಷಗಳು ತಮ್ಮ ಅವಧಿಯಲ್ಲಿ ಬಡವರಿಗೆ ಒಂದೇ ಒಂದು ಮನೆ ಕೊಡಲಿಲ್ಲ. ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ಇಂತವರು ನಮ್ಮನ್ನು ಟೀಕಿಸುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ.ಆದಾಯದಲ್ಲಿ ಇಡೀ ದೇಶದಲ್ಲಿ ಕನ್ನಡಿಗರೇ ನಂಬರ್ ಒನ್. ಇದು ನಮ್ಮ ಸರ್ಕಾರದ ಆರ್ಥಿಕ ಸಾಧನೆ. ತೆರಿಗೆ ಪಾವತಿಯಲ್ಲಿ ರಾಜ್ಯ ಇಡೀ ದೇಶದಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. ನಮ್ಮ ಯೋಜನೆಗಳು ಸರ್ವಧರ್ಮ ಹಾಗೂ ಸರ್ವಜಾತಿಗಳಿಗೂ ಸಹ ತಲುಪುತ್ತಿವೆ, ಇದು ನಮ್ಮ ಸರ್ಕಾರದ ಜಾತ್ಯತೀತ ಸಾಧನೆ ಎಂದರು.ಕೊಪ್ಪಳ ಜಿಲ್ಲೆಯೊಂದರಲ್ಲೇ 9 ಕೋಟಿ 22 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿ ಜಿಲ್ಲೆಗೆ 330 ಕೋಟಿ ಖರ್ಚಾಗಿದೆ. ಗೃಹ ಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ 317776 ಫಲಾನುಭವಿಗಳಿಗೆ 1283 ಕೋಟಿ ವಿತರಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ 275903 ಫಲಾನುಭವಿಗಳಿಗೆ 290 ಕೋಟಿ ಕೊಟ್ಟಿದ್ದೇವೆ. ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ 1.96 ಕೋಟಿ ಜನರಿಗೆ 320 ಕೋಟಿ ಮೊತ್ತದ 39.097 ಮೆಟ್ರಿಕ್ ಟನ್ ದವಸಧಾನ್ಯಗಳನ್ನು ವಿತರಿಸಲಾಗಿದೆ ಎಂದು ವಿವರಿಸಿದ ಸಿಎಂ ಬೊಕ್ಕಸ ಖಾಲಿ ಆಗಿದ್ದರೆ ಇಷ್ಟೊಂದು ಪ್ರಮಾಣದ ಹಣವನ್ನು ಜನರಿಗೆ ಕೊಡಲಾಗುತ್ತಿತ್ತಾ ಎಂದು ಪ್ರಶ್ನಿಸಿದರು.

ಶಿವರಾಜ ತಂಗಡಗಿ. ಹಿಂದುಳಿದ ವರ್ಗಗಳ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಮಾತನಾಡಿ

ಸರಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲಾ ಎನ್ನುವ ವಿರೋಧ ಪಕ್ಷದ ನಾಯಕರೇ ಕೊಪ್ಪಳಕ್ಕೆ ಬಂದು ನೋಡಿ

2000 ಕೋಟಿ ರೂ,ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದು ಐತಿಹಾಸಿಕ ಕಾರ್ಯಕ್ರಮ ಇದಾಗಿದೆ.

ಸಮಾಜ ಒಡೆಯುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದು ಹೇಳುವ ಬಿಜೆಪಿಗರೇ ಸಮಾಜ ಒಡೆಯುವ ಕೆಲಸ ಮಾಡುವದು ನೀವು ಜಾತಿ ಜಾತಿಗಳ ಮದ್ಯ ಬೆಂಕಿ ಹಚ್ಚುವ ಕೆಲಸ ಮಾಡುವದು ನೀವು ನಾವಲ್ಲಾ.

ಸರ್ವೆ ಕಾರ್ಯದಿಂದ ಹಿಂದುಳಿದ ಹಾಗೂ ಬಡವರಿಗೆ ನ್ಯಾಯ ಸಿಗುವಂತಾಗಬೇಕು ಎಂದು ಸರ್ವೆ ಮಾಡಿಸಲಾಗುತ್ತಿದೆ ಎಂದರು.

, ಕೊಪ್ಪಳ ಜಿಲ್ಲೆಯಲ್ಲಿ ಅಂದಾಜು 2000 ಕೋಟಿ ರೂ.ಮೊತ್ತದ ನಾನಾ ಅಭಿವೃದ್ಧಿ ಕಾರ್ಯಗಳಿಗೆ ಅಕ್ಟೋಬರ್ 6ರಂದು ಚಾಲನೆ ದೊರೆತದ್ದು ಕೊಪ್ಪಳ ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ, ಬಳ್ಳಾರಿ ಜಿಲ್ಲೆಗಳ ಜನತೆಗೆ ಸಾಕಷ್ಟು ಅನುಕೂಲವಾದ 371ಜೆ ಯೋಜನೆ ಜಾರಿಗೆ ಶ್ರಮಿಸಿದ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರ ಭಾವಚಿತ್ರವನ್ನು ಮತ್ತು ಕಡುಬಡವರ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿದ ಅನ್ನರಾಮಯ್ಯ ಎಂದೇ ಖ್ಯಾತಿ ಹೊಂದಿದ ಸಿದ್ದರಾಮಯ್ಯವರ ಭಾವಚಿತ್ರವನ್ನು ನಾವೆಲ್ಲರೂ ನಮ್ಮ ಮನೆಯಲ್ಲಿ ಹಾಕಬೇಕಿದೆ ಎಂದರು.

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಆಗಿರುವ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಮಾತನಾಡಿ, ಶ್ರೀ ಸಿದ್ಧರಾಮಯ್ಯನವರು ಈ ರಾಷ್ಟ್ರಕಂಡ ಜನಪರ ಹಾಗೂ ಜನಪ್ರಿಯ ಮುಖ್ಯಮಂತ್ರಿಯಾಗಿದ್ದಾರೆ. ಅವರ ಆಡಳಿತದ ಶಿಸ್ತು ಇತರರಿಗೆ ಮಾದರಿಯಾಗಿದೆ ಎಂದು ಅವರು ಮುಖ್ಯಮಂತ್ರಿಗಳ ಆಡಳಿತದ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅತ್ಯಂತ ಆರ್ಥಿಕ ಶಿಸ್ತಿನಿಂದ ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದಾರೆ. ಶಕ್ತಿ ಯೋಜನೆಯಡಿ ರಾಜ್ಯದಲ್ಲಿ

3 ಕೋಟಿ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಅನುಕೂಲವಾಗಿದೆ. ಇದುವರೆಗೆ 559 ಕೋಟಿ ಮಹಿಳೆಯರು ಉಚಿತವಾಗಿ ಸಂಚರಿಸಿರುವುದು ಗೋಲ್ಡನ್ ರೆಕಾರ್ಡ ಆಗಿದೆ. 1.24 ಕೋಟಿಗು ಹೆಚ್ಚು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ 2000 ರೂ. ಸಹಾಯಧನ ತಲುಪುತ್ತಿದೆ. 4.57 ಲಕ್ಷ ಜನರಿಗೆ ಅನ್ನಭಾಗ್ಯ ಯೋಜನೆಯಡಿ ಪಡಿತರ ಕೊಡುತ್ತಿದ್ದೇವೆ. ರಾಜ್ಯದ 1.68 ಕೋಟಿ ಮನೆಗಳಿಗೆ ಗೃಹಜ್ಯೋತಿ ಮತ್ತು ಯುವನಿಧಿ ಯೋಜನೆಗಳ ಅನುಕೂಲತೆ ದೊರೆಯುತ್ತಿದೆ. ಈ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ಮುಖ್ಯಮಂತ್ರಿಗಳು 83 ಸಾವಿರ ಕೋಟಿ ರೂ ಹಣವನ್ನು ನಾನಾ ಅಭಿವೃದ್ದಿ ಕಾರ್ಯಗಳಿಗೆ ನೀಡಿದ್ದಾರೆ. ರಾಜ್ಯದಲ್ಲಿನ 36 ಲಕ್ಷ ರೈತರಿಗೆ ಪಂಪಸೇಟ್ ಹಾಗೂ ಇನ್ನಿತರ ಸೌಕರ್ಯ ಒದಗಿಸಲಾಗಿದೆ. ಇದೇ ರೀತಿ ಸಾಕಷ್ಟು ಯೋಜನೆ ಜಾರಿ ಮಾಡಿದ್ದೇವೆ. ರಾಜ್ಯ ಸರ್ಕಾರವು ವಾರ್ಷಿಕವಾಗಿ ಜನರಿಗೆ ಸಾವಿರಾರು ಕೋಟಿ ರೂ.ಗಳನ್ನು ವ್ಯಯಿಸುತ್ತಿದೆ ಎಂದು ಅವರು ತಿಳಿಸಿದರು.

ಬಿ.ಝಡ್,ಜಮೀರ ಅಹ್ಮದ್, ವಕ್ಪ್ ಹಾಗೂ ವಸತಿ ಸಚಿವರು ಮಾತನಾಡಿ ಬಿಜೆಪಿ ಸರಕಾರದಲ್ಲಿ ಬಡವರಿಗೆ ಮನೆ ನೀಡಿದೆ ಎಂದು ಸಾಬಿತುಪಡಿಸಿದರೆ ನಾ ಇವತ್ತೆ ನನ್ನ ಸಚಿವ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಲು ಸಿದ್ದ.

ಹಿಂದೂ- ಮುಸ್ಲಿಂ ಎಂದು ಜಾತಿ ಜಾತಿಗಳ ಮದ್ಯ ವಿಷಬೀಜ ಬಿತ್ತುವ ಹಾಗೂ ಸಮಾಜದಲ್ಲಿ ಅಶಾಂತಿಯನ್ನುಂಟು ಮಾಡುವದು ಅವರ ನಿರಂತರ ಕೆಲಸವಾಗಿದೆ.

ಬಿಜೆಪಿ ಸ್ವತಂತ್ರವಾಗಿ ರಾಜ್ಯದಲ್ಲಿ ಒಂದು ಸಾರಿಯು ಅಧಿಕಾರ ಇಡಿದಿಲ್ಲಾ ಬರಿ ವಾಮಮಾರ್ಗದಲ್ಲಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದು ಜನರ ಒಳಿತಿಗಾಗಿ ಅಲ್ಲಾ

ಸಂವಿಧಾನ ಬದಲಾವಣೆ ಮಾಡೋಕೆ ನಾವು ಬರೋದು ಎಂದು ಬಿಜೆಪಿಯವರು ಹೇಳಿದ್ದರು ಆದರೆ ನಾವು ಹೇಳುತ್ತೇವೆ ನಾವು ಸಂವಿಧಾನಕ್ಕೆ ಗೌರವ ನೀಡುತ್ತೇವೆ ಹಾಗೂ ಡಾ.ಅಂಬೇಡ್ಕರ್ ಅವರಿಗೆ ಗೌರ ನೀಡುತ್ತೇವೆ.

ಕಳೆದ ಸರಕಾರ ವಸತಿ ಇಲಾಖೆಯನ್ನೆ ಹಳ್ಳ ಇಡಿಸಿತ್ತು ಯಾವ ಮನೆಗೂ ಹಣ ನಿಡಿರಲಿಲ್ಲಾ ನಾವು ಬಂದ ನಂತರ ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ.

ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವ ವಿಜ್ಞಾನ ಇಲಾಖೆ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಮಾತನಾಡಿ, ರಾಜ್ಯದ ಪ್ರಗತಿ ಜೊತೆಗೆ ಜನರ ಆರ್ಥಿಕತೆಯನ್ನು ಸುಧಾರಿಸಲು ಸಿಎಂ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ನೀಡಿದೆ. ಇದರಿಂದ ಸುಮಾರು ಒಂದು ಲಕ್ಷ ಕೋಟಿ ರೂ.ಗಳನ್ನು ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿಸುತ್ತಿದೆ. ಬಡವರ ಮಕ್ಕಳು ಡಾಕ್ಟರ್ ಆಗಬೇಕೆಂಬ ಉದ್ದೇಶದಿಂದ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜುಗಳಾಬೇಕೆಂದು ಸಿಎಂ ಸಿದ್ದರಾಮಯ್ಯನವರು 2013ರಲ್ಲಿ ನಿರ್ಧರಿಸಿದ್ದು, ಇಂದು ರಾಜ್ಯದಲ್ಲಿ ಒಟ್ಟು 22 ಸರ್ಕಾರಿ ಮೆಡಿಕಲ್ ಕಾಲೇಜುಗಳಿವೆ. ಇದರಿಂದಾಗಿ ಮತ್ತು 371ಜೆ ಜಾತಿಯಿಂದಾ ನಮ್ಮ ಭಾಗದ ಸುಮಾರು 9 ಸಾವಿರ ಬಡ, ಹಿಂದುಳಿದ ವರ್ಗದ ಜನರ ಮಕ್ಕಳು ವೈದ್ಯರಾಗಿದ್ದಾರೆ. ಇಂದು ಕೊಪ್ಪಳದಲ್ಲಿ 201 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾದ 450 ಬೆಡ್ ಬೋಧಕ ಆಸ್ಪತ್ರೆ ಉದ್ಘಾಟನೆ ಮಾಡಲಾಗಿದ್ದು, ಇದಕ್ಕೆ ಇನ್ನು 60 ಕೋಟಿ ರೂ.ಗಳ ವೆಚ್ಚದಲ್ಲಿ ಇತರೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಜನರಿಗೆ ಆರೋಗ್ಯ ಸೇವೆಗಳನ್ನು ನೀಡಲಾಗುವುದು ಎಂದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಹಾಗೂ ಜೇವರ್ಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಅಜಯ್ ಧರ್ಮಸಿಂಗ್ ಮಾತನಾಡಿ. ಕೊಪ್ಪಳ ಜಿಲ್ಲೆಯು ಐತಿಹಾಸಿಕ ನಗರವಾಗಿದ್ದು. ಇದು ಭತ್ತದ ಕಣಜ. ಆಟಿಕೆಯ ಪ್ರಪಂಚ. ಜೈನರ ಕಾಶಿ. ವಿಜಯನಗರ ಸಾಮ್ರಾಜ್ಯದಲ್ಲಿ ಶ್ರೀಮಂತವಾದ ಊರಾಗಿತ್ತು. ಈ ಬೃಹತ್ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ನನಗೆ ತುಂಭಾ ಸಂತೋಷವಾಗುತ್ತಿದೆ. ನಮ್ಮ ಸರ್ಕಾರ ಬಡವರು. ದೀನ ದಲಿತರು. ಹಿಂದುಳಿದವರು. ಮಹಿಳೆಯರು ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ಪರವಾಗಿ ಕೆಲಸ ಮಾಡುತ್ತಿದೆ. ಕಳೆದ 10 ದಿನಗಳಲ್ಲಿ ನಮ್ಮ ಭಾಗದಲ್ಲಿ ಮಳೆಯ ಪ್ರವಾಹದಿಂದಾಗಿ 10 ಲಕ್ಷ 50 ಸಾವಿರ ಬೆಳೆ ಹಾನಿಯಾಗಿದೆ. ಮಾನ್ಯ ಮುಖ್ಯಮಂತ್ರಿಗಳು ಈಗಾಗಲೇ ವೈಮಾನಿಕ ಸಮೀಕ್ಷೆ ಮಾಡಿದ್ದಾರೆ. ಶೇ. 75 ರಿಂದ 80 ಪ್ರತಿಶತ ಬೆಳೆಹಾನಿ ನಮ್ಮ ಭಾಗದಲ್ಲಿ ಆಗಿದೆ. ಗ್ಯಾರಂಟಿ ಯೋಜನೆಗಳಲ್ಲಿ ದಾಸೋಹ ತತ್ವ ಸಿದ್ದಾಂತಗಳ ಪರಿ ಕಲ್ಪನೆ ಇದೆ. ಅನ್ನಭಾಗ್ಯ. ಶಕ್ತಿ ಮತ್ತು ಗೃಹ ಲಕ್ಷೀ ಯೋಜನೆಗಳಿಂದ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದರೆ. ಯುವ ನಿಧಿ ಯೋಜನೆಯಲ್ಲಿ ಕಾಯಕ ತತ್ವ ಇದೆ. ನಮ್ಮ ಸರ್ಕಾರ ನುಡಿದಂತೆ ನಡೆದ ಸರ್ಕಾರವಾಗಿದ್ದು ಈ ಭಾಗದ ಅಭಿವೃದ್ಧಿಗೆ ಪ್ರತಿವರ್ಷ 5 ಸಾವಿರ ಕೋಟಿ ರೂ ಅನುದಾನವನ್ನು ನೀಡಲಾಗುತ್ತಿದೆ ಎಂದರು.

ಈ ಭಾಗದಲ್ಲಿ 371 ಜೆ. ಜಾರಿಯಾಗಿ 11 ವರ್ಷದಲ್ಲಿ ಕಾಲಿಟ್ಟಿದ್ದೆ. ಇದರ ತಿದ್ದುಪಡಿಗೆ ಮಲ್ಲಿಕಾರ್ಜುನ ಖರ್ಗೆಯವರು. ಹಾಗೂ ಮಾಜಿ. ಮುಖ್ಯಮಂತ್ರಿಗಳಾಗಿದ್ದ ದಿ. ಧರ್ಮಸಿಂಗ್ ಅವರ ಶ್ರಮದಿಂದ ಅಂದಿನ ಯುಪಿಎ ಸರ್ಕಾರದಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಇದನ್ನು ಜಾರಿಗೆ ತರಲಾಯಿತು. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಅಕ್ಷರ ಆವಿಷ್ಕಾರ ಸೇರಿದಂತೆ ಇತರೆ ವಿವಿಧ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಈ ಭಾಗದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದು ಅವರು ಹೇಳಿದರು.

ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಮಾತನಾಡಿ, ಕೊಪ್ಪಳದಲ್ಲಿ ನಡೆಯುತ್ತಿರುವ ಈ ಬಹುದೊಡ್ಡ ಸಮಾವೇಶ ಇತಿಹಾಸದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡುವ ಕಾರ್ಯಕ್ರಮ ಆಗಿದೆ. 2013 ರಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಪ್ಪಳ ವೈದ್ಯಕೀಯ ಕಾಲೇಜಿಗೆ 135 ಕೋಟಿ ಅನುದಾನವನ್ನು ನೀಡಿ ಅಂದು ಅಡಿಗಲ್ಲು ಹಾಕಿದ್ದರು ಇಂದು ಉದ್ಘಾಟನೆ ಮಾಡಿರುವುದು ವಿಶೇಷವಾಗಿದೆ. ಈ ಹಿಂದೆ ಜನರು ಹುಬ್ಬಳ್ಳಿ ಮತ್ತು ಬಳ್ಳಾರಿಗೆ ಹೋಗಿ ಚಿಕಿತ್ಸೆ ಪಡೆಯುತ್ತಿದ್ದರು ಈ ಆಸ್ಪತ್ರೆಯಿಂದ ನಮ್ಮ ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ. 450 ಬೆಡ್ಡಿನ ಸೂಪರ ಸ್ಪೇಶಾಲಿಟಿ ಆಸ್ಪತ್ರೆ ಉದ್ಘಾಟನೆ ನೆರವೇರಿಸಿದ್ದಾರೆ ಎಂದರು.

1048 ಕೋಟಿ ಅನುದಾನವನ್ನು ಏತ ನೀರಾವರಿಗೆ ನೀಡಿರುವುದರಿಂದ 77 ಸಾವಿರ ಏಕರೆ ಜಮೀನಿಗೆ ನೀರಾವರಿಯಾಗಿದೆ. ಪಂಚ ಗ್ಯಾರಂಟಿ ಯೋಜನೆ ನೀಡುವ ಮೂಲಕ ದೇಶದಲ್ಲಿ ಯಾರು ಮಾಡದಂತಹ ಕೆಲಸವನ್ನು ಸಿದ್ದರಾಮಯ್ಯನವರು ಮಾಡಿದ್ದಾರೆ. ಕೊಪ್ಪಳ ಜಿಲ್ಲೆಗೆ 12 ವರ್ಷಗಳಲ್ಲಿ 10 ಸಾವಿರ ಕೋಟಿ ಅನುದಾನವನ್ನು ನೀಡುವ ಮೂಲಕ ಕೊಪ್ಪಳ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದಾರೆ. ಆರೋಗ್ಯ. ನೀರಾವರಿ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಪ್ರತಿವರ್ಷ 5 ಸಾವಿರ ಕೋಟಿ ಅನುದಾನವನ್ನು ನೀಡುವ ಮೂಲಕ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ನೀಡುತ್ತಿದ್ದಾರೆ. ಕೊಪ್ಪಳ ಜಿಲ್ಲೆಗೆ ವಿಮಾನ ನಿಲ್ದಾಣವಾಗಬೇಕು ಮತ್ತು ಕೊಪ್ಪಳ ವಿಶ್ವವಿದ್ಯಾಲಯ ಅಭಿವೃದ್ಧಿಯಾಗಬೇಕಿದೆ ಎಂದು ಅವರು ಹೇಳಿದರು.

*ಶುಭ ಸಂದೇಶ ವಾಚನ:* ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಶುಭ ಸಂದೇಶವನ್ನು ಕಾರ್ಯಕ್ರಮದಲ್ಲಿ ಓದಿ ಹೇಳಲಾಯಿತು.

*ಪ್ರಗತಿ ಪುಸ್ತಕ ಲೋಕಾರ್ಪಣೆ:* ಕೊಪ್ಪಳ ಜಿಲ್ಲೆಯ ಸರ್ವ ರೀತಿಯ ಯೋಜನೆಗಳ ಕಾರ್ಯಕ್ರಮಗಳ ಪ್ರಗತಿ ಮಾಹಿತಿಯ ಪುಸ್ತಕವನ್ನು ಇದೆ ವೇಳೆ ಮುಖ್ಯಮಂತ್ರಿಗಳು ಲೋಕಾರ್ಪಣೆ ಮಾಡಿದರು.

*ಸನ್ಮಾನ:* ಕಾರಟಗಿ ಹಾಗೂ ಕನಕಗಿರಿ ತಾಲ್ಲೂಕುಗಳ ಪ್ರಜಾಸೌಧ ನಿರ್ಮಾಣಕ್ಕೆ ಜಮೀನು ದಾನ ಮಾಡಿದ ದಾನಿಗಳಾದ ಕೆ.ಸುಂಕಪ್ಪ ಮತ್ತು ಶಮ್ಸ್ ತಬ್ರೇಜ್ ಅವರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಸವಲತ್ತುಗಳ ವಿತರಣೆ: ಪಶು ಇಲಾಖೆಯಿಂದ ಕುರಿಗಾರರ ಸಂಘದ ಸದಸ್ಯರಿಗೆ ಗುರುತಿನ ಚೀಟಿ, ಕಾರ್ಮಿಕ ಪರಿಹಾರ ನಿಧಿ, ಪ್ರವಾಸಿ ಟ್ಯಾಕ್ಸಿ ಸೇರಿದಂತೆ ಸರ್ಕಾರದ ಇತರೆ ವಿವಿಧ ಸವಲತ್ತುಗಳನ್ನು ಮುಖ್ಯಮಂತ್ರಿಗಳು ಫಲಾನುಭವಿಗಳಿಗೆ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ. ರೇವಣ್ಣ, ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾದ ಕೆ.ರಾಜಶೇಖರ ಬಸವರಾಜ್ ಹಿಟ್ನಾಳ, ಸಿಂಧನೂರು ಶಾಸಕರಾದ ಹಂಪನಗೌಡ ಬಾದರ್ಲಿ, ವಿಧಾನ ಪರಿಷತ್ ಸದಸ್ಯರಾದ ಶರಣಗೌಡ ಅನ್ನದಾನಗೌಡ ಪಾಟೀಲ್ ಬಯ್ಯಾಪುರ, ಮುನಿರಾಬಾದ ತುಂಗಭದ್ರ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನ್ ಸಾಬ್ ನಬಿಸಾಬ ದೋಟಿಹಾಳ, ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಮದ್ ಪಟೇಲ್ ಎಸ್.ಎಮ್. ಪಟೇಲ್, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ. ಶ್ರೀನಿವಾಸ್ ಗುಪ್ತಾ, ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್, ಮಾಜಿ ಸಚಿವರಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಮಾಜಿ ಸಂಸದರಾದ ಕರಡಿ ಸಂಗಣ್ಣ, ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ಮೊಹಸಿನ್, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವ ವಿಜ್ಞಾನ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಮನೋಜ್ ಕುಮಾರ್ ಮೀನಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ತುಳಸಿ ಮದ್ದಿನೇನಿ, ವಸತಿ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು, ಕೃಷ್ಣಭಾಗ್ಯ ಜಲನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಬಾಗಲಕೋಟೆಯ ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಆಯುಕ್ತರು ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನರಾಜ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಝಹಿರಾ ನಸೀಮ್, ಬಳ್ಳಾರಿ ವಲಯದ ಪೊಲೀಸ್ ಮಹಾನಿರೀಕ್ಷಕರಾದ ವರ್ತಿಕ ಕಟಿಯಾರ್, ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ಧಿ ಹಾಗೂ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

oplus_1026

Leave a Reply

Your email address will not be published. Required fields are marked *